ಉಡುಪಿ: ಚಂದ್ರಯಾನ 3 ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಗೆ ಪೇಜಾವರ ಶ್ರೀಗಳು ಪ್ರಾರ್ಥನೆ ಸಲ್ಲಿಸಿದ್ದಾರೆ. ತುಪ್ಪದ ದೀಪ ಹಚ್ಚುವ ಮೂಲಕ ಲಕ್ಷ್ಮೀ ನರಸಿಂಹ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ; ಕೆಆರ್ಎಸ್ ಡ್ಯಾಂ: ವಾರದಲ್ಲಿ 7 ಟಿಎಂಸಿ ನೀರು ಖಾಲಿ; ಮಂಡ್ಯ ರೈತರಲ್ಲಿ ಆತಂಕ!
ವಿಜ್ಞಾನಿಗಳ ಚಂದ್ರಯಾನ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಲಕ್ಷ್ಮೀ ನರಸಿಂಹ ದೇವರಲ್ಲಿ ಪ್ರಾರ್ಥನೆ ಮಾಡಿದ್ದು, ಚಾತುರ್ಮಾಸ್ಯದಲ್ಲಿದ್ದರೂ ಚಂದ್ರಯಾನ 3 ಯಶಸ್ಸಿಗಾಗಿ ಶ್ರೀಗಳು ಪೂಜೆ ಮಾಡಿದ್ದಾರೆ.
ಚಂದ್ರನ ದಕ್ಷಿಣ ಧೃವದ ಮೇಲೆ ಚಂದ್ರಯಾನ-3ಯ ವಿಕ್ರಮ ಲ್ಯಾಂಡರ್ ಸ್ಪರ್ಶಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಈ ಲ್ಯಾಂಡ್ ಅನ್ನು ವೀಕ್ಷಿಸಲು ಬೆಂಗಳೂರಿನ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಬೆಂಗಳೂರಿನ ನೆಹರು ತಾರಾಲಯದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ದೇವಸ್ಥಾನ , ಮನೆಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ.ಇಂದು ಸಂಜೆ 6 ಗಂಟೆ ಸುಮಾರಿಗೆ ವಿಕ್ರಂ ಲ್ಯಾಂಡರ್ ಅನ್ನು ಸೇಫಾಗಿ ಲ್ಯಾಂಡ್ ಮಾಡುವ ನಿರೀಕ್ಷೆಯಲ್ಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.