ಬಳ್ಳಾರಿ: ಮೈತ್ರಿ ಕುರಿತಂತೆ ಯಡಿಯೂರಪ್ಪ ಏನು ಹೇಳಿಕೆ ನೀಡಿದ್ದಾರೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಕರ್ನಾಟಕದಲ್ಲಿ ನಾಲ್ಕು ತಿಂಗಳ ಕಾಂಗ್ರೆಸ್ ಕಾರ್ಯವೈಖರಿ ಹೇಗಿದೆ ಎಂದು ಜನರಿಗೆ ಗೊತ್ತಾಗಿದೆ, ಎಲ್ಲರೂ ಸೇರಿ ಕಾಂಗ್ರೆಸ್ ವಿರೋಧ ಮಾಡುವ ಅವಶ್ಯಕತೆ ಇದೆ, ಮೈತ್ರಿ ಕುರಿತು ನಿನ್ನೆ ಕುಮಾರಸ್ವಾಮಿ ಹೇಳಿಕೆ ಗಮನಿಸಿದರೆ, ಈ ಕುರಿತು ಚರ್ಚೆ ಆಗಬೇಕು, ಮೈತ್ರಿ ಮಾಡಿಕೊಳ್ಳುವ ವಿಚಾರ ಸುದೀರ್ಘ ಚರ್ಚೆ ಆಗಬೇಕಿದೆ, ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ, ಅಂತಿಮ ಹಂತದ ನಿರ್ಧಾರವಾಗಿಲ್ಲಎಂದು ತಿಳಿಸಿದರು.
ಇದನ್ನೂ ಓದಿ: ‘ಗ್ಯಾರಂಟಿ’ ಸರ್ಕಾರ ಗುಲಾಮಿ ಮನಸ್ಥಿಯವರು : ಸಿ ಟಿ ರವಿ
ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ಕೀಲುಗೊಂಬೆಯಾಗಿದ್ದಾರೆ, 2013 ರಲ್ಲಿ ಒಂದು ರೀತಿಯಲ್ಲಿ ಸ್ವತಂತ್ರರಿದ್ದರು ಈಗ ಇರುವ ಸಿದ್ದರಾಮಯ್ಯ ಬೇರೆ, ಸಿದ್ದರಾಮಯ್ಯರನ್ನು ಎರಡು ರೂಪದಲ್ಲಿ ನಾನು ನೋಡಿದ್ದೇನೆ, ಸಿದ್ದರಾಮಯ್ಯ ಮೇಲೆ ಕೆಲ ಕಾಂಗ್ರೆಸ್ ನಾಯಕರ ಪ್ರಭಾವ ಇದೆ,ಕಾಂಗ್ರೆಸ್ ನಲ್ಲಿ ಆಂತರಿಕ ಬೇಗುದಿ ಹೆಚ್ಚಾಗಿದೆ ಎಂದರು.
ಸಿದ್ದರಾಮಯ್ಯ ಮೇಲಿಂದ ಮೇಲೆ ಆಂತರಿಕ ಒತ್ತಡ ಹೆಚ್ಚಾಗಿದೆ, ಅದರ ಒಂದು ಭಾಗ ಹರಿಪ್ರಸಾದ್ ಮಾತನಾಡಿದ್ದಾರೆ, ಹರಿಪ್ರಸಾದ್ ಸಂಪೂರ್ಣವಾಗಿ ಮಾತನಾಡಿದ್ರೂ ಅದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿಲ್ಲ, ಇದನ್ನು ನೋಡಿದ್ರೇ ಪಕ್ಷದಲ್ಲಿ ಹರಿಪ್ರಸಾದ್ ಪ್ರಭಾವ ಹೆಚ್ಚಿದೆ ಎಂದು ಅನ್ನಿಸುತ್ತೆ, ಆಂತರಿಕವಾಗಿ ಬಹಳ ಅಡೆತಡೆಯಲ್ಲಿ ಸಿಎಂ ಕೆಲಸ ಮಾಡುತ್ತಿದ್ದಾರೆ, ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ: ಗೆವೆಲ್ ಹಸ್ತಾಂತರಿಸಿ ಐತಿಹಾಸಿಕ ಜಿ20ಗೆ ತೆರೆ ಎಳೆದ ಮೋದಿ
ಟ್ರಾನ್ಸ್ಫರ್ ದಂಧೆ ಮೂಗಿನ ನೇರಕ್ಕೆ ನಡೆದರೂ ಅವರು ಅಸಹಾಯಕರಾಗಿದ್ದಾರೆ, ರಾಜ್ಯ ಆರ್ಥಿಕತೆ ದಿವಾಳಿಯಾದರೂ ಅವರು ಏನು ಮಾಡದ ಪರಿಸ್ಥಿತಿಯಲ್ಲಿ ಇದ್ದಾರೆ, ವರ್ಗಾವಣೆ ಸಿ ಎಂ ಕಚೇರಿಯಲ್ಲಿ ನಡೆಯುತ್ತಿದೆ, ಅದನ್ನು ತಡೆಯುವಲ್ಲಿ ಸಿಎಂ ಅಸಹಾಯಕ ಆಗಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲಿ ಅವರ ಶಾಸಕರು ಅವರ ಆಡಳಿತದ ಬಗ್ಗೆ ಮಾತನಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.