ಬೆಂಗಳೂರು : ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮುಯ್ಯ ವಾಟಾಳ್ ನಾಗರಾಜ್ರನ್ನ ಹಾಡಿ ಹೊಗಳಿದ್ದಾರೆ.
ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು.
ಇನ್ನು ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಕರೆ ನೀಡಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ ಗೋವಿಂದು ಅವರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ” ಎಂದರು.
ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು. ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಎಂಇಎಸ್ ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.
ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಬೆಂಗಳೂರು ಬಂದ್ಗೆ ವಾಟಾಳ್ ನಾಗರಾಜ್ ಕರೆ!
ಗ್ರೇಟರ್ ಬೆಂಗಳೂರು ಕಾಯ್ದೆಯನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮೇ 18 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಯ್ದೆಯನ್ನು ಹಿಂಪಡೆಯಬೇಕು. ಇಲ್ಲವಾದರೆ, ಬೆಂಗಳೂರು ಬಂದ್ ಮಾಡಿ ಪ್ರತಿಭಟಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಬಿಬಿಎಂಪಿ ವಿಭಜನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಬೆಂಗಳೂರು ಸಿವಿಕ್ ಸಂಘ ಕೂಡ ಗ್ರೇಟರ್ ಬೆಂಗಳೂರು ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.